ರೈತನಾಗುವ ಹಾದಿಯಲ್ಲಿ . . .

ಮಿತ್ರರೇ,

ನಾನು ಸಂಪಾದಿಸಿರುವ, ಶ್ರೀ ಮಧುಸೂದನ ಪೆಜತ್ತಾಯರ 'ರೈತನಾಗುವ ಹಾದಿಯಲ್ಲಿ' ಕೃತಿಯು ದಿನಾಂಕ 25.1.2011 ಮಂಗಳವಾರ ಸಂಜೆ 5.30ಕ್ಕೆ ಕನ್ನಡ ಭವನದ 'ನಯನ' ಸಭಾಂಗಣದಲ್ಲಿ ಕೃತಿಯನ್ನು ಲೋಕಾರ್ಪಣೆ ಮಾಡುವ ಮೂಲಕ, ನಾಡಿನ ಹಿರಿಯ ಸಜ್ಜನ ರೈತರೊಬ್ಬರನ್ನು ಸನ್ಮಾನಿಸಲು ತೀರ್ಮಾನಿಸಿಲಾಗಿದೆ. ನಿಮಗೆಲ್ಲರಿಗೂ ಆತ್ಮೀಯ ಆಹ್ವಾನ ಪತ್ರಿಕೆ ಕಳುಹಿಸಲಾಗಿವುದು. ದಯಮಾಡಿ ಬನ್ನಿ. ನಾಡಿನ ರೈತಸುಮುದಾಯಕ್ಕೆ ಅರ್ಪಣೆಯಾಗಿರುವ ಈ ಪುಸ್ತಕದ ಲೋಕಾರ್ಪಣೆಯ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ನಾವೂ ರೈತರ ಜೊತೆ ನಿಲ್ಲೋಣ. ಕಥೆಗಾರ ಅಬ್ದುಲ್ ರಷೀದ್ ಅವರ ಮುನ್ನುಡಿ ಪುಸ್ತಕಕ್ಕಿದೆ. ಶ್ರೀ ಜಿ.ಎಸ್.ಎಸ್.ರಾವ್ ಅವರು ಬೆನ್ನುಡಿಯನ್ನು ಬರೆದಿದ್ದಾರೆ.
ಪೆಜತ್ತಾಯ ಅವರನ್ನು ಬಲ್ಲವರು, ಬಂಧು-ಮಿತ್ರರು, ಅವರ ಬರಹಗಳ ಓದುಗರು, ಅಭಿಮಾನಿಗಳು, ಬ್ಲಾಗ್ ಓದುಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಪ್ರಾರ್ಥನೆ.





ರೈತನಾಗುವ ಹಾದಿಯಲ್ಲಿ . . .
ಯಶಸ್ವೀ ರೈತರೊಬ್ಬರು, ಸುಮಾರು ನಲವತ್ತೈದು ವರ್ಷಗಳ ಹಿಂದೆ, ರೈತರಾಗಲು ಹೊರಟಾಗಿನ ಪ್ರಾರಂಭದ ಒಂದು ವರ್ಷದ ಕಥೆ! ಆದರ್ಶದ ಬೆನ್ನು ಹತ್ತಿದ ಯುವಕನೊಬ್ಬನ ನಿಜಜೀವನದ ಸಾಹಸಗಾಥೆಯನ್ನು ಕಥೆಯಾಗಿಸಿದ್ದಾರೆ ಪೆಜತ್ತಾಯರು. ತಾವು ನಡೆದ ಹಾದಿಯಲ್ಲಿ ಪ್ರಕೃತಿ ವಿಕೋಪಗಳು, ಸಾಮಾಜಿಕ ವೈಪರರೀತ್ಯಗಳು, ಮನುಷ್ಯರ ಸ್ವಭಾವಗಳು ಇವುಗಳ ನಡುವೆಯೂ ಗುರಿಸಾಧನೆ ಮಾಡುವುದು ಈ ಕೃತಿಯ ತಿರುಳು. ವಿಷಾದದಲ್ಲಿ ಕೊನೆಯಾಗಬಹುದಾಗಿದ್ದ ಘಟನೆಗಳು ಕೂಡ ತಿಳಿಹಾಸ್ಯದ ಲೇಪವನ್ನೊಳಗೊಂಡು ಸಹ್ಯವಾಗಿಬಿಡುತ್ತವೆ. ಸಮಾಜದ ಮತ್ತು ಪರಿಸರದ ಅವಿಭಾಜ್ಯ ಅಂಗವೆಂದು ತಮ್ಮನ್ನು ಗುರುತಿಸಿಕೊಂಡಿರುವ ಪೆಜತ್ತಾಯರು, ರೋಚಕ ಚಿತ್ರಗಳನ್ನು ನೀಡುತ್ತಾರೆ. ತಾವು ಪಟ್ಟ ಪಾಡನ್ನು ಹಾಡಾಗಿಸಿರುವ ಕೃತಿ ಇದು.
- ಜಿ.ಎಸ್.ಎಸ್.ರಾವ್

0 comments:

Post a Comment